ನಮ್ಮ ಪ್ರೀತಿಯ ಗೆಳೆಯ ಪ್ರವೀಣ್ ಭಟ್ ರವರು ಒಂದು ಚಿತ್ರದ ಬಗೆಗೆ ಒಂದು ಕವನ ಬರೆದಿದ್ದಾರೆ (http://nenapinasalu.blogspot.com/), ಆ ಒಂದು ಚಿತ್ರವನ್ನು ನೋಡಿದಾಗ ನನಗೆ ತೋಚಿದ ಹಾಗೆ ಒಂದು ಕವನ ಬರೆದ್ದಿದ್ದೇನೆ ಮನಸಿಗೆ ಸಿಕ್ಕ ಪದಗಳನ್ನು ಒಂದೆಡೆ ಸೇರಿಸಿ ನಿಮ್ಮ ಮುಂದಿಟ್ಟಿದ್ದೀನಿ ಹೇಗಿದೆ ಎಂದು ತಿಳಿಸಿ
(ಚಿತ್ರ ಕೃಪೆ : ಪ್ರವೀಣ್ ಭಟ್ -http://nenapinasalu.blogspot.com/)
ಎಂದೋ ಕಳೆದ ನಿನ್ನೆಯ ಮರೆಯುತ
ಎಂದೋ ಬರುವ ನಾಳೆಯ ನೆನೆಯುತ
ಸಾಗುತಿದೆ ಜೀವನವೆಂಬ ಪಯಣದ ರಥ
ಮನವು ಮಾಗಿಯುದು ದೇಹವು ಬಾಗಿಹುದು
ಮುಗವು ಬಾಡಿಹುದು ಮುಗ್ದತೆ ಮಾತ್ರವದು
ಎಂದಿನಂತೆ ಇಹುದು ದಗ್ಧ ಮನದ ಒಳಗೆ
ಅಂದು ಎಲ್ಲರು ನನ್ನವರೆ ನನ್ನೊಳಗೆ ಬಲವಿದ್ದಾಗ
ಇಂದು ಎಲ್ಲರು ಪರರೆ ನನ್ನಲಿ ಏನು ಇಲ್ಲವೀಗ
ನಾನಂದು ನಗುತಿದ್ದಾಗ ಜೊತೆಗಿದ್ದರು ನಾಲ್ಕಾರು ಜನ
ಇಂದು ನಾ ಅಳುತಿರುವಾಗ ಉಳಿದಿಹುದು ಬರಿ ಮೌನ
ಅಂದು ನೀಡುತ್ತಿದ್ದ ಕೈಗಳಿವು ಇಂದು ಬೇಡುತ್ತಿರುವಾಗ
ಅಂದು ಬೇಡುತ್ತಿದ್ದ ಕೈಗಳವು ಇಂದು ನಿಂತು ನೋಡುತ್ತಿವೆ
ಕಣ್ಣಂಚಿನಲ್ಲೊಂದು ಹನಿ ಕಣ್ಣೀರು
ಮನದಾಳದಲ್ಲೊಂದು ನಿಟ್ಟುಸಿರು
ಬಿಟ್ಟು ಬಿಡದೆ ಬರುತಿಹ ಭಾವವದು
ಕಟ್ಟ ಕಡೆಯವರೆಗಿರುವ ನೋವೆ ಇದು
ಕಾಯಿತ್ತಿರುವೆ ನಾನು ಆ ದಿನವ
ಸೊರಗುತ್ತಿರುವ ಈ ದೇಹವು
ಮಣ್ಣಲ್ಲಿ ಮಣ್ಣಾಗುವ ಆ ಕ್ಷಣವ.....
ಇಂತಹ ಒಂದು ಪ್ರಯತ್ನಕ್ಕೆ ನಾಂದಿ ಆದ ಪ್ರೀತಿಯ ಗೆಳೆಯ ಪ್ರವೀಣ್ ಭಟ್ ಅವರಿಗೆ ವಂದನೆಗಳು
--
ಸತೀಶ್ ಬಿ ಕನ್ನಡಿಗ
13 comments:
ಮನವು ಮಾಗಿಯುದು ದೇಹವು ಬಾಗಿಹುದು
ಮುಗವು ಬಾಡಿಹುದು ಮುಗ್ದತೆ ಮಾತ್ರವದು
ಎಂದಿನಂತೆ ಇಹುದು ದಗ್ಧ ಮನದ ಒಳಗೆ
thumbha chennagi idhe satish
keep going
best of luck...!!! :)
ಮನವು ಮಾಗಿಯುದು ದೇಹವು ಬಾಗಿಹುದು
ಮುಗವು ಬಾಡಿಹುದು ಮುಗ್ದತೆ ಮಾತ್ರವದು
ಎಂದಿನಂತೆ ಇಹುದು ದಗ್ಧ ಮನದ ಒಳಗೆ
thumbha chennagi bandidhe satish
keep going
best of luck....!!! :)
dhanyavaadagalu josna
heart touching. sathish nim kavana nodi nan future hege irutheno ansidde.
@manjula : hey yavattu haage andukolla baradu ene bandru navu face madtivi anno confidence irbeku aagale jeevana dalli tondare barolla..ee reetiyeella think madbedi
tumba chenagide kanri.superb
thumba channagide gelaya
Hi Sateesh...
katu satya.. bareda shaili atyuttama
ಅಂದು ಎಲ್ಲರು ನನ್ನವರೆ ನನ್ನೊಳಗೆ ಬಲವಿದ್ದಾಗ
ಇಂದು ಎಲ್ಲರು ಪರರೆ ನನ್ನಲಿ ಏನು ಇಲ್ಲವೀಗ
ನಾನಂದು ನಗುತಿದ್ದಾಗ ಜೊತೆಗಿದ್ದರು ನಾಲ್ಕಾರು ಜನ
ಇಂದು ನಾ ಅಳುತಿರುವಾಗ ಉಳಿದಿಹುದು ಬರಿ ಮೌನ
estu nija allava ee salugalu?
pravi
ಅದ್ಭುತವಾಗಿದೆ.. ಸತೀಶ ಇಂದು ಬಾಳ ಮುಸಂಜೆಯಲ್ಲಿರುವ ಎಷ್ಟೋ ಜೀವಗಳ ಸತ್ಯ ಕಥನ..
ತುಂಬಾ ಅದ್ಬುತವಾಗಿ ಹೇಳಿದಿರಿ ಸತೀಶ್
ಮನದಲ್ಲಿನ ದುಗುಡ ದುಮ್ಮಾನಗಳಿಗೆ ಭೂಮಿಕೆಯಾಗಿದೆ ಕವಿತೆ.. ಮನಮುಟ್ಟುವಂತಹ ನಿರೂಪಣೆ ಮತ್ತು ಸೂಕ್ಮ ವಿಸ್ತು ವಿಸ್ತಾರ ಗಮನ ಸೆಳೆಯುತ್ತದೆ..
ಅಂದು ನೀಡುತ್ತಿದ್ದ ಕೈಗಳಿವು ಇಂದು ಬೇಡುತ್ತಿರುವಾಗ
ಅಂದು ಬೇಡುತ್ತಿದ್ದ ಕೈಗಳವು ಇಂದು ನಿಂತು ನೋಡುತ್ತಿವೆ
ಈ ಸಾಲುಗಳು ವಾಸ್ತವಕ್ಕೆ ಹಿಡಿದ ಕೈಗನ್ನಡಿಯಂತಿದೆ ಈ ಸಾಲುಗಳು.. ಕವಿತೆ ಸರಾಗವಾಗಿ ಓದಿಸಿಕೊಂಡಿದೆ ಮತ್ತು ಓದುಗರ ಮನಸ್ಸನ್ನು ವಾಸ್ತವಕ್ಕೆ ತೆರೆದಿಡುತ್ತದೆ ಕವಿತೆ..
ಮನವು ಮಾಗಿಯುದು ದೇಹವು ಬಾಗಿಹುದು
ಮುಗವು ಬಾಡಿಹುದು ಮುಗ್ದತೆ ಮಾತ್ರವದು
ಎಂದಿನಂತೆ ಇಹುದು ದಗ್ಧ ಮನದ ಒಳಗೆ
chennagide sathish ji...
Post a Comment